ಬೆಂಗಳೂರು ಜ 20 (DaijiworldNews/KP): ರಾಜ್ಯದ ಜನರ ದೈನಂದಿನ ಚಟುವಟಿಕೆಗಳಿಗೆ ತೊಂದರೆ ನೀಡಿ ಲಾಕ್ ಡೌನ್ ಇಲ್ಲವೆ ವೀಕೆಂಡ್ ಕರ್ಪ್ಯೂ ಜಾರಿಗೊಳಿಸುವ ಉದ್ದೇಶ ಸರ್ಕಾರಕಿಲ್ಲ, ವೈಜ್ಙಾನಿಕ ನೆಲೆಯಲ್ಲಿ ಕ್ರಮ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಪ್ರತಿದಿನ 1,20,000 ಕೋವಿಡ್ ಬರುವ ಸಾಧ್ಯತೆ ಇದೆ ಎಂದು ತಜ್ಙರು ಮಾಹಿತಿ ನೀಡಿದ್ದು, ಕನಿಷ್ಠ 60 ರಿಂದ 70 ಸಾವಿರ ಕೊರೊನಾ ದಾಖಲಾಗಬಹುದು ಈ ನಿಟ್ಟಿನಲ್ಲಿ ಸರ್ಕಾರವು ಕ್ರಮ ತೆಗೆದುಕೊಳ್ಳುತ್ತಿದೆ. ಜನಪ್ರತಿನಿಧಿಗಳಾಗಿ ಜನ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಇಲ್ಲವಾದರೆ ಸರ್ಕಾರಕ್ಕೂ ಕೆಟ್ಟ ಹೆಸರು. ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಮತ್ತು ತಜ್ಙರೊಂದಿಗೆ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಜನರಿಗೆ ಅನುಕೂಲಕರವಾದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ .
ರಾಜಧಾನಿಯಲ್ಲಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚೆ ಮಾಡಲಿದ್ದಾರೆ. ಕ್ರಮ ತೆಗೆದುಕೊಳ್ಳದಿದ್ದರೆ ಹೆಚ್ಚಿನ ಸೋಂಕು ಪತ್ತೆಯಾಗಬಹುದು ಎಂಬ ಆತಂಕವು ಇದೆ. ತಜ್ಙರು ಯಾವ ನಿರ್ಧಾರ ಕೈಗೊಳ್ಳುತ್ತಾರೋ ನಮಗೂ ತಿಳಿದಿಲ್ಲ. ಜನರ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಸರ್ಕಾರ ಒಳ್ಳೆಯ ನಿರ್ಧಾರ ಮಾಡಲಿದೆ, ನಾಳೆ ಜನತೆಗೆ ಪಾಲಿಗೆ ಶುಭ ಸುದ್ದಿ ಸಿಗುವ ಗುಡ್ ಫ್ರೈಡೆ ಆಗಬಹುದು ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.