ಬೆಂಗಳೂರು, ಜ 20 (DaijiworldNews/MS): ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿನ ಸ್ಕಾರ್ಫ್ ವಿವಾದ ಕುರಿತು ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ "ಶಾಲೆಯು ಧರ್ಮವನ್ನು ಅಭ್ಯಾಸ ಮಾಡುವ ಸ್ಥಳವಲ್ಲ " ಎಂದು ಹೇಳಿದ್ದಾರೆ.
ಕಾಲೇಜಿನಲ್ಲಿನಲ್ಲಿನ ವಸ್ತ್ರ ಸಂಹಿತೆ ನಿಯಮಗಳು 1985ರಿಂದ ಜಾರಿಯಲ್ಲಿದೆ. ಆದರೆ ಅವರ ಈ ಪ್ರತಿಭಟನೆ ಕೇವಲ 15-20 ದಿನಗಳ ಹಿಂದೆ ಆರಂಭವಾಗಿವೆ. ಈ ಅಭ್ಯಾಸವು ಅಶಿಸ್ತಿನ ಭಾಗವಾಗಿದೆ ಎಂದು ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಸಂಬಂಧಿಸಿದ ಕಾಲೇಜಿನಲ್ಲಿ ಸುಮಾರು ದಾಖಲಾದ 100ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಇಲ್ಲ ಆದರೆ ಕೆಲವೇ ಕೆಲವು ವಿದ್ಯಾರ್ಥಿಗಳು ಮಾತ್ರ ವಸ್ತ್ರ ಸಂಹಿತೆ ಪಾಲಿಸಲು ಬಯಸುವುದಿಲ್ಲ. 2023ರಲ್ಲಿ ಚುನಾವಣೆ ಹಿನ್ನಲೆಯಲ್ಲಿ ಕಾಲೇಜಿನ ಕ್ಯಾಂಪಸ್ನಲ್ಲಿರುವ ಕೆಲವು ಜನರು ಈ ವಿಚಾರವನ್ನು ರಾಜಕೀಯಗೊಳಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ವಸ್ತ್ರ ಸಂಹಿತೆ ನಿಯಮವನ್ನು ಪಾಲಿಸಿಕೊಂಡು ಬಂದಿದ್ದರು. ಆದರೆ ವಸ್ತ್ರ ಸಂಹಿತೆಯಿಂದ ಈಗ ಮಾತ್ರ ಅವರಿಗೆ ಏಕೆ ಸಮಸ್ಯೆ ಆಗಿದೆ ಎಂದು ಪ್ರಶ್ನಿಸಿದ್ದಾರೆ.