ಬೆಂಗಳೂರು, ಜ 21 (DaijiworldNews/HR): ವಿದ್ಯುತ್ ದರ ಏರಿಕೆ ಇವತ್ತಿನ ದಿನಗಳಲ್ಲಿ ಅನಿವಾರ್ಯವಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ನಾವು ಕೆಲವೊಂದಿಷ್ಟು ಯೋಜನೆ ಕೈಗೆತ್ತಿಕೊಳ್ಳುತ್ತಿದ್ದು, 12 ಸಾವಿರ ಕೋಟಿಯಷ್ಟು ಬೇರೆ ಬೇರೆ ಇಲಾಖೆಯಿಂದ ಹಣ ಬರಬೇಕಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ, ಬಿಡಬ್ಲ್ಯೂಎಸ್ಎಸ್ಬಿ ಸೇರಿ ಹಲವು ಇಲಾಖೆಗಳಿಂದ ಹಣ ಬಾಕಿ ಬರುವುದು ಬಾಕಿ ಇದೆ" ಎಂದರು.
ಇನ್ನು "ಕೆಇಆರ್ಸಿ, ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಶಿಫಾರಸು ಮಾಡಿದರೆ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಮೊದಲಿಗೆ ಅವರು ವರದಿ ಕೊಡಲಿ. ವರದಿ ಕೊಟ್ಟ ಬಳಿಕ ವಿದ್ಯುತ್ ದರ ಏರಿಕೆಗೆ ನಿರ್ಧರಿಸುತ್ತೇವೆ" ಎಂದು ಹೇಳಿದ್ದಾರೆ.