ಬೆಂಗಳೂರು, ಜ 22 (DaijiworldNews/HR): ಕಾಂಗ್ರೆಸ್ ಸೇರ್ಪಡೆಗಾಗಿ ಬಿಜೆಪಿ ಮತ್ತು ಜೆಡಿಎಸ್ನ ಹೆಚ್ಚಿನ ನಾಯಕರು ಕಾದುಕುಳಿತಿದ್ದು, ಮುಂಬರುವ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿಯ ಅನೇಕ ನಾಯಕರು ಕಾಂಗ್ರೆಸ್ಗೆ ಸೇರ್ಪಡೆಗೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ ಅವರು ಪಕ್ಷದ ಟಿಕೆಟ್ ನಿರೀಕ್ಷೆ ಮಾಡದೆ ಸೇರಬೇಕು ಮತ್ತು ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿರಬೇಕು" ಎಂದರು.
ಇನ್ನು "ಕರ್ನಾಟಕದ ಜನರು 2013-2018ರ ಅವಧಿಯಂತೆ ಮತ್ತೆ ಉತ್ತಮ ಆಡಳಿತವನ್ನು ಮರುಸ್ಥಾಪಿಸಲು ಬಯಸುತ್ತಿದ್ದು, ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಮಾತನಾಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿಯುವುದು ಶೇ.120ರಷ್ಟು ಖಚಿತ" ಭರವಸೆ ವ್ಯಕ್ತಪಡಿಸಿದ್ದಾರೆ.