ಮಂಡ್ಯ, ಫೆ 11 (DaijiworldNews/HR): ಮಹಾರಾಷ್ಟ್ರದ ಬಾಂದ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೀಶನ್ ಸಿದ್ದಿಕ್ ಅವರು ಪಿಇಎಸ್ ಕಾಲೇಜಿನಲ್ಲಿ ಜೈಶ್ರೀರಾಮ್ ಘೋಷಣೆಗೆ ಪ್ರತಿಯಾಗಿ 'ಅಲ್ಲಾಹು ಅಕ್ಬರ್' ಎಂದು ಕೂಗಿದ್ದ ಹಿಜಾಬ್ ಧಾರಿ ವಿದ್ಯಾರ್ಥಿನಿ ಮುಸ್ಕಾನ್ ಮನೆಗೆ ಭೇಟಿ ನೀಡಿ ಐಫೋನ್ ಮತ್ತು ಸ್ಮಾರ್ಟ್ವಾಚ್ ಗಿಫ್ಟ್ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಮಾತನಾಡಿರುವ ಜೀಶನ್ ಸಿದ್ದಿಕ್, ಮುಸ್ಕಾನ್ ಘೋಷಣೆ ಕೂಗಿ ನಮ್ಮ ಸಮುದಾಯಕ್ಕೆ ಗೌರವ ತಂದಿದ್ದಾರೆ. ಅಷ್ಟು ಜನರ ಎದುರು ಅಲ್ಲಾಹು ಅಕ್ಬರ್ ಎಂದು ಕೂಗಿದ್ದಾರೆ. ಅದು ನಮಗೆ ಹೆಮ್ಮೆ ಎನ್ನಿಸುತ್ತಿದೆ. ಅವರ ಹಕ್ಕಿನ ಬಗ್ಗೆ ಧೈರ್ಯದಿಂದ ಧ್ವನಿ ಎತ್ತಿದ್ದಾರೆ ಎಂದರು.
ಇನ್ನು 2 ದಿನದ ಹಿಂದೆ ಜೆಡಿಎಸ್ ಮುಖಂಡ ಇಮ್ರಾನ್ ಪಾಷಾ ಕೂಡ, ಮುಸ್ಕಾನಾ ಕುಟುಂಬಕ್ಕೆ ಧೈರ್ಯ ಹೇಳಿ 1 ಲಕ್ಷ ರೂ. ಮೊತ್ತದ ಚೆಕ್ ವಿತರಣೆ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.
ಇದೇ ಗಿಫ್ಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ವಿದ್ಯಾರ್ಥಿನಿ ಮುಸ್ಕಾನ್ಗೆ ಉಡುಗೊರೆ ಕೊಟ್ಟರೆ ತಪ್ಪೇನು? ಆಕೆಯನ್ನ ಮೆಚ್ಚಿ ಉಡುಗೊರೆ ಕೊಟ್ಟರೇ ಯಾವುದೇ ತಪ್ಪಿಲ್ಲ. ನಾನು ಕೂಡ ವಿದ್ಯಾರ್ಥಿನಿಯನ್ನ ಭೇಟಿಯಾಗುತ್ತೇನೆ' ಎಂದಿದ್ದಾರೆ.