ನವದೆಹಲಿ, ಫೆ 11 (DaijiworldNews/KP): ಇನ್ನು ಭಾರತೀಯ ಜನತಾ ಪಕ್ಷದ ಸರಕಾರವು ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಹಾಗೂ ಸಬ್ ಕಾ ಪ್ರಯಾಸ್ ನೀತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತ ಬಂದಿದೆ, ಆದರೆ ವಿಪಕ್ಷಗಳು ಪ್ರತಿಯೊಬ್ಬರನ್ನು ಒಡೆದಾಳುವ ಮತ್ತು ದೇಶವನ್ನು ಒಟ್ಟಿಗೆ ಲೂಟಿ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ಕಾಂಗ್ರೆಸ್ ವಿರುದ್ದ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
ಉತ್ತರಾಖಂಡ್ ನ ಅಲ್ಮೋರಾದಲ್ಲಿ ವಿಜಯ್ ಸಂಕಲ್ಪ ಸಭಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರ ಉತ್ತರಾಖಂಡ್ ಜಿಲ್ಲೆಯ ಟೆಹ್ಸಿಲ್ಸ್ ನ ಗಡಿಭಾಗದಲ್ಲಿರುವ ಹಳ್ಳಿಗಳನ್ನು ನಿರ್ಲಕ್ಷಿಸುತ್ತಿರುವುದಾಗಿ ಆರೋಪಿಸಲಾಗಿತ್ತು. ಆದರೆ ಬಿಜೆಪಿ ಸರ್ಕಾರವು ಗಡಿಪ್ರದೇಶವನ್ನು ಅಭಿವೃದ್ಧಿಪಡಿಸಲು ಯೋಜನೆಯನ್ನು ರೂಪಿಸಿದೆ ಎಂದು ಹೇಳಿದರು.
ಜನರ ಏಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಉತ್ತಮ ಉದ್ದೇಶ ಹೊಂದಿರುವ ಪಕ್ಷಗಳನ್ನೇ ಮತದಾರರು ಯಾವಾಗಲೂ ಬೆಂಬಲಿಸುತ್ತಾರೆ, ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕೆಂಬುದು ಜನರೇ ತೀರ್ಮಾನಿಸಿದ್ದಾರೆ ಎಂದರು.
ಈಗಾಗಲೇ ಉತ್ತರಾಖಂಡ್ ನಲ್ಲಿ ಗುರುವಾರ ಮೊದಲ ಹಂತದ ಮತದಾನ ನಡೆದಿದ್ದು, ಈ ಬಾರಿಯೂ ಬಿಜೆಪಿ ಪೂರ್ಣ ಪ್ರಮಾಣದ ಬಹುಮತದೊಂದಿಗೆ ಜಯಭೇರಿ ಗಳಿಸುವ ವಿಶ್ವಾಸವಿದೆ ಎಂದು ಹೇಳಿದರು.