ಬೆಂಗಳೂರು, ಫೆ. 11(DaijiworldNews/SM): ರಾಜ್ಯದಲ್ಲಿ ಉಂಟಾದ ಹಿಜಾಬ್-ಕೇಸರಿ ಶಾಲು ವಿವಾದದ ಘರ್ಷಣೆಯಿಂದಾಗಿ ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ಕಾಲೇಜುಗಳಿಗೆ ನೀಡಲಾಗಿದ್ದ ರಜೆಯನ್ನು ವಿಸ್ತರಿಸಲಾಗಿದೆ. ಫೆ. 16ರವರೆಗೆ ರಾಜ್ಯದಾದ್ಯಂತ ರಜೆ ವಿಸ್ತರಣೆ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು,ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ರಜೆ ಮುಂದುವರಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ನೋಡಿಕೊಂಡು ಮುಂದಿನ ನಿರ್ಧಾರ ಎಂಬುವುದಾಗಿ ಉನ್ನತ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಇನ್ನು ಫೆಬ್ರವರಿ 14ರಿಂದ 10ನೇ ತನಕದ ತರಗತಿಗಳನ್ನು ಆರಂಭಿಸಲು ಸರಕಾರ ಆದೇಶ ಹೊರಡಿಸಿದೆ. ಆದರೆ, ಕಾಲೇಜುಗಳನ್ನು ಮಾತ್ರ ಸದ್ಯ ಆರಂಭಿಸಲು ಹಿಂದೇಟು ಹಾಕಿದೆ.