ಬೆಂಗಳೂರು, ಫೆ. 11(DaijiworldNews/SM): ರಾಜ್ಯದಲ್ಲಿ ಉಂಟಾದ ಹಿಜಾಬ್-ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ನೀಡಲಾಗಿದ್ದ ರಜೆ ವಿಸ್ತರಿಸಲಾಗಿದ್ದು, ಆದರೆ, ಪರೀಕ್ಷಾ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸರಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಫೆಬ್ರವರಿ 12ರಿಂದ ಫೆಬ್ರವರಿ 16ರ ತನಕ ಎಲ್ಲಾ ಪಿಯು, ಪದವಿ, ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ, ಈ ದಿನಗಳಲ್ಲಿ ಪರೀಕ್ಷೆಗಳಿದ್ದಲ್ಲಿ ಅವುಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ದಿನಗಳಲ್ಲಿ ಪರೀಕ್ಷೆ ನಿಗದಿಯಾಗಿದ್ದಲ್ಲಿ ಯಥಾವತ್ತಾಗಿ ನಡೆಸಲು ಸರಕಾರದ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದಾರೆ. ಹಾಗೂ ಆನ್ ಲೈನ್ ಶಿಕ್ಷಣ ಮುಂದುವರೆಸಲು ಅವಕಾಶ ನೀಡಲಾಗಿದೆ.