ಜೈಪುರ, ಫೆ 12 (DaijiworldNews/HR): ಉಡುಪಿಯ ಕಾಲೇಜೊಂದರಲ್ಲಿ ಆರಂಭವದ ಹಿಜಾಬ್ ವಿವಾದ ಇದೀಗ ರಾಜ್ಯ, ದೇಶದವರೆ ಹಬ್ಬಿದೆ. ರಾಜಸ್ಥಾನದ ಜೈಪುರ ಜಿಲ್ಲೆಯ ಚಕ್ಸು ಎಂಬಲ್ಲಿನ ಖಾಸಗಿ ಕಾಲೇಜೊಂದು ಬುರ್ಖಾ ಧರಿಸಿ ಬಂದ ಹುಡುಗಿಯರನ್ನು ಕಾಲೇಜಿಗೆ ಪ್ರವೇಶಿಸದಂತೆ ತಡೆದಿದೆ ಎಂದು ತಿಳಿದು ಬಂದಿದೆ.
ಹಿಜಾಬ್ ಧರಿಸಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವಕಾಶವಿಲ್ಲ ಎಂದು ಕಾಂಗ್ರೆಸ್ ಶಾಸಕ ವಾಜಿಬ್ ಅಲಿ ಹೇಳಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಘಟನೆಯ ಬಗ್ಗೆ ಗಮನಹರಿಸಿ ತನಿಖೆಗೆ ಆದೇಶಿಸಬೇಕು ಎಂದು ಇತ್ತಾಯಿಸಿದ್ದಾರೆ.
ಇನ್ನು ದ್ವೇಷದ ವ್ಯಾಪಾರಿಗಳು ಈಗ ರಾಜಸ್ಥಾನವನ್ನು ವಿಷಪೂರಿತಗೊಳಿಸಲು ಬಯಸುತ್ತಾರೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಈ ಘಟನೆಯನ್ನು ಅರಿತುಕೊಂಡು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಾಜಿದ್ ಅಲಿ ಹೇಳಿದ್ದಾರೆ.