ಬೆಂಗಳೂರು, ಫೆ 12 (DaijiworldNews/KP): ಆಧುನಿಕ ಗ್ಯಾಜೆಟ್ಗಳನ್ನು ಬಳಸಿಕೊಂಡು ಕಾಲೇಜುಗಳಲ್ಲಿ ಶಿಕ್ಷಣವನ್ನು ನೀಡುವುದು ಸರ್ಕಾರದ ಗುರಿಯಾಗಿದೆ, ಹೀಗಿರುವಾಗ ಕಾಲೇಜುಗಳಲ್ಲಿ ಮೊಬೈಲ್ ಫೋನ್ಗಳ ಬಳಕೆಯನ್ನು ನಿಷೇಧ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ವಿವಾದದ ಹೆಚ್ಚಾದ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲಾಗುವುದು ಎಂಬ ಊಹಾಪೋಹಗಳು ಕೇಳಿ ಬಂದಿತ್ತು ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇತ್ತೀಚಿನ ದಿನಗಳಲ್ಲಿ ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್ ಮುಂತಾದ ಆಧುನಿಕ ಗ್ಯಾಜೆಟ್ಗಳು ಬೋಧನೆ-ಕಲಿಕೆ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಿದೆ , ಹಾಗಾಗಿ ಕಾಲೇಜುಗಳಲ್ಲಿ ಮೊಬೈಲ್ ಫೋನ್ಗಳ ಬಳಕೆಯನ್ನು ನಿಷೇಧ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳು ಅಥವಾ ಪೋಷಕರು ಇಂತಹ ಉಹಾಪೋಹಗಳನ್ನು ನಂಬಬಾರದು, ಆಧುನಿಕ ಗ್ಯಾಜೆಟ್ಗಳನ್ನು ಬಳಸಿಕೊಂಡು ಎಲ್ಲಾ ಹಂತದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಸರ್ಕಾರದ ಗುರಿಯಾಗಿದೆ. ಅದರಂತೆ ಸಂಸ್ಥೆಗಳಲ್ಲಿ ಮೊಬೈಲ್ ಬಳಕೆಯನ್ನು ಮುಂದುವರಿಸಲಾಗುವುದು. ಸದ್ಯಕ್ಕೆ ರಾಜ್ಯದ ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧ ಮಾಡುವುದಿಲ್ಲ, ಎಂದು ಅಶ್ವಥ್ ನಾರಾಯಣ ಸ್ಪಷ್ಟನೆ ನೀಡಿದ್ದಾರೆ.