ಬೆಂಗಳೂರು, ಫೆ 20 (DaijiworldNews/KP): ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದರೆ ಅದು ದೇಶಕ್ಕೆ ಅವಮಾನ ಮಾಡಿದಂತೆ ಎಂದು ಮಾಜಿ ಸಚಿವ ಯು ಟಿ ಖಾದರ್ ಹೇಳಿದರು.
ಕಾಂಗ್ರೆಸ್ ನಾಯಕರಿಂದ ಆಹೋರಾತ್ರಿ ಧರಣಿ ವಿಚಾರವಾಗಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದರೆ ಅದು ದೇಶಕ್ಕೆ ಅವಮಾನ ಮಾಡಿದಂತೆ. ಈಶ್ವರಪ್ಪ ಹೇಳಿಕೆ ಕೇವಲ ಅವರ ಹೇಳಿಕೆಯಲ್ಲ, ಬದಲಾಗಿ ಇಡೀ ಪಕ್ಷದ ಹೇಳಿಕೆ ಎಂದು ಕಿಡಿಕಾರಿದರು.
ದೇಶದ ಸಂವಿಧಾನ, ಸಾರ್ವಭೌಮತೆ ಬಗ್ಗೆ ಮಾತನಾಡುವಾಗ ಎಲ್ಲರೂ ಎಚ್ಚರಿಕೆ ವಹಿಸಬೇಕು. ಅಲ್ಲದೆ ಸದನದಲ್ಲಿ ರಾಷ್ಟ್ರ ಧ್ವಜಕ್ಕಾದ ಅವಮಾನ ಬಗ್ಗೆ ಬಿಜೆಪಿ ನಾಯಕರು ಚರ್ಚೆ ಮಾಡಲಿ. ಅದನ್ನು ಬಿಟ್ಟು ಸಣ್ಣ ವಿಚಾರಗಳಿಗೂ ಕಾಂಗ್ರೆಸ್ ಜೊತೆ ಹೋರಾಟ ಮಾಡುವುದಲ್ಲ ಎಂದು ಹೇಳಿದರು.
ಇನ್ನು ರಾಜೀನಾಮೆ ಬಗ್ಗೆ ಬಿಜೆಪಿ ನಾಯಕರು ಕ್ರಮ ತೆಗೆದುಕೊಳ್ಳದೇ ಇದ್ದರೆ, ಈಶ್ವರಪ್ಪ ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನ ಇಡೀ ದೇಶಕ್ಕೆ ಗೊತ್ತಾಗುತ್ತದೆ ಎಂದರು.