ಬೆಂಗಳೂರು,ಮಾ.01 (DaijiworldNews/SM): ರಷ್ಯಾ ನಡೆಸಿದ ದಾಳಿಯಿಂದಾಗಿ ಉಕ್ರೇನ್ ನಲ್ಲಿ ಸಾವಿಗೀಡಾದ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಗೆ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಉಲ್ಲೇಖಿಸಿರುವ ಅವರು, ಹಾವೇರಿ ಮೂಲದ ನವೀನ್ ಎಂಬಾತ ಉಕ್ರೇನ್ನಲ್ಲಿ ರಷ್ಯಾ ದಾಳಿಗೆ ಬಲಿಯಾಗಿರುವುದು ತಿಳಿದು ಅತೀವ ಬೇಸರವಾಗಿದೆ. ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಹಿತೈಷಿಗಳಿಗೆ ನಾನು ಸಂತಾಪ ಸೂಚಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಭಾರತ ಸರಕಾರದ ವೈಫಲ್ಯದಿಂದಾಗಿ ವಿದ್ಯಾರ್ಥಿಯೋರ್ವ ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ಅವರು ಆರೋಪಿಸಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನು ಏರ್ ಲಿಫ್ಟ್ ಮಾಡಲು ಸರಕಾರದ ಕೈಯಲ್ಲಿ ಸಾಕಷ್ಟು ಸಮಯವಿತ್ತು. ಆದರೆ, ಬೇಜವಾಬ್ದಾರಿಯಿಂದಾಗಿ ವಿದ್ಯಾರ್ಥಿಯೋರ್ವ ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ಅವರು ಟ್ವೀಟ್ ಮಾಡಿದ್ದಾರೆ.