ಲಕ್ನೊ, ಮಾ 10 (DaijiworldNews/HR): ಮುಂಬರುವ 2024ರ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಮತ ಎಣಿಕೆ ಭರದಿಂದ ಸಾಗುತ್ತಿದೆ.
ಈ ಕುರಿತು ಟ್ವೀಟ್ ಮಾಡಿರುವ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಪರೀಕ್ಷೆ ಇನ್ನೂ ಪೂರ್ಣಗೊಳ್ಳಬೇಕಿದೆ. ನಿರ್ಧಾರಗಳಿಗೆ ಈಗ ಸಮಯ ಬಂದಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಹಗಲು ರಾತ್ರಿ ಜಾಗರೂಕತೆ ಮತ್ತು ಕ್ರಿಯಾಶೀಲರಾಗಿರುವ ಸಮಾಜವಾದಿ ಪಕ್ಷ ಮತ್ತು ಮೈತ್ರಿಕೂಟದ ಪ್ರತಿಯೊಬ್ಬ ಕಾರ್ಯಕರ್ತರು, ಬೆಂಬಲಿಗರು, ನಾಯಕರು, ಪದಾಧಿಕಾರಿಗಳು ಮತ್ತು ಧನ್ಯವಾದಗಳು ಎಂದಿದ್ದಾರೆ.
ಇನ್ನು ಮತಯಂತ್ರಗಳನ್ನು ರಾಜಕೀಯ ಪಕ್ಷಗಳಿಗೆ ತಿಳಿಸದೆ ಸ್ಥಳಾಂತರ ಮಾಡಲಾಗಿದ್ದು, ಮೋಸ ನಡೆಯುತ್ತಿದೆ ಎಂದು ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದರು.
ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ಬಿಜೆಪಿ, ಗೋವಾದಲ್ಲಿ ಕಾಂಗ್ರೆಸ್ ಮತ್ತು ಪಂಜಾಬ್ನಲ್ಲಿ ಆಪ್ ಮುನ್ನಡೆ ದಾಖಲಿಸಿವೆ.