ಬೆಂಗಳೂರು, ಮಾ 10 (DaijiworldNews/HR): ಕರ್ನಾಟಕದಲ್ಲಿ ಆಗಲೇ ಅಧಿಕಾರ ಹಿಡಿದೇ ಬಿಟ್ಟಿದ್ದೀವಿ ಅನ್ನೋ ಹೇಗೆ ಕರ್ನಾಟಕದಲ್ಲಿ ಜೆಡಿಎಸ್ ಅನ್ನು ನಾಶ ಮಾಡ್ತೀವಿ ಎಂದು ಹೊರಟಿದ್ದ ಕಾಂಗ್ರೆಸ್ಸಿಗರಿಗೆ ಪಂಚರಾಜ್ಯ ಚುನಾವಣೆ ಫಲಿತಾಂಶ ತಕ್ಕ ಉತ್ತರ ಕೊಟ್ಟಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಮತ್ತು ಪಂಜಾಬ್ ಚುನಾವಣೆ ಫಲಿತಾಂಶವೇ ನಮಗೆ ಸ್ಫೂರ್ತಿ. ಗೋವಾ, ಉತ್ತರಾಖಂಡ್ನಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಲು ಅಲ್ಲಿ ಯಾರೂ ನಾಯಕರಿಲ್ಲ ಎಂಬಂತೆ ಕರ್ನಾಟಕದ ಸೂತ್ರಧಾರಿಗಳನ್ನು ಕರೆಸಿಕೊಳ್ಳಲಿಲ್ಲವೇ? ಈಗ ಏನಾಯ್ತು ನೋಡಿ? ಎಂದು ಡಿಕಿಶಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಮೊನ್ನೆ ಎಕ್ಸಿಟ್ ಪೋಲ್ ಬಿಡುಗಡೆಯಾಗಿತ್ತು. ಅದೇ ರೀತಿ ಫಲಿತಾಂಶ ಕಾಣಿಸುತ್ತಿದೆ. ನೂರಾರು ವರ್ಷ ಇತಿಹಾಸವಿದೆಯೆಂದು ಏನ್ ಕಾಂಗ್ರೆಸ್ ಹೇಳುತ್ತೆ? ಎಂದು ಪ್ರಶ್ನಿಸಿದ್ದಾರೆ.