ಬೆಂಗಳೂರು, ಮಾ 10 (DaijiworldNews/DB): ಕ್ರೀಡೆ, ಸ್ಪರ್ಧೆ ಮತ್ತು ಹೋರಾಟದ ಕುರಿತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮಾತುಗಳಿರುವ ವೀಡಿಯೋವನ್ನು ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಐದು ರಾಜ್ಯಗಳ ಫಲಿತಾಂಶದಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಹರಿಯಾಣಗಳಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದ್ದರೆ, ಪಂಜಾಬ್ ನಲ್ಲಿ ಆಮ್ ಆದ್ಮಿ ಪಾರ್ಟಿ ವಿಜಯ ಪತಾಕೆ ಹಾರಿಸಿದೆ. ಪಂಚರಾಜ್ಯ ಗಳಲ್ಲೂ ಅಧಿಕಾರ ಪಡೆಯುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಆದರೆ ಸೋಲನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪ್ರಯತ್ನ ನಡೆಸಿದೆ.
ಅದಕ್ಕಾಗಿ, ಫಲಿತಾಂಶ ಹೊರ ಬಿದ್ದ ಬೆನ್ನಲ್ಲೇ ರಾಹುಲ್ ಗಾಂಧಿ ಮಾತನಾಡಿರುವ ವೀಡಿಯೋವನ್ನು ಕಾಂಗ್ರೆಸ್ ಹಂಚಿಕೊಂಡಿದೆ. 'ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸಿದ್ದಾಗ ಮೊದಲು ನಮ್ಮೊಳಗಿನ ಭಯದ ವಿರುದ್ಧ ಹೋರಾಡುತ್ತೇವೆ. ಭಯದ ಅನುಭವ ತಿಳಿಯಲು ಕ್ರೀಡೆ ಒಂದು ವೇದಿಕೆ' ಎಂಬುದಾಗಿ ಈ ವೀಡಿಯೋ ದಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.