ಲಕ್ನೊ, ಮಾ 10 (DaijiworldNews/DB): ಉತ್ತಮ ಆಡಳಿತ ಮತ್ತು ರಾಷ್ಟ್ರೀಯತೆಗೆ ಮತ ನೀಡಿ ಉತ್ತರಪ್ರದೇಶದ ಜನರು ನಮ್ಮನ್ನು ಗೆಲ್ಲಿಸಿದ್ದಾರೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಲಕ್ನೋದ ಬಿಜೆಪಿ ಕಚೇರಿಗೆ ಗುರುವಾರ ಸಂಜೆ ಆಗಮಿಸಿದ ಅವರು, ಕೋವಿಡ್ ನಂತಹ ರೋಗಗಳ ವಿರುದ್ದ ಹೋರಾಡುವಾಗ ಕಂಗ್ರೆಸ್ ನಮ್ಮ ವಿರುದ್ಧ ಅಪಪ್ರಚಾರದಲ್ಲಿ ತೊಡಗಿತ್ತು. ಆದರೆ ಅದು ಪಿತೂರಿ ಎಂಬುದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಪಂಚರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಅಧಿಕಾರ ನೀಡಿದ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಜನಪರ ಆಡಳಿತ ನೀಡುವುದೇ ನಮ್ಮ ಸಂಕಲ್ಪ ಎಂದರು.