ಧುರಿ, ಮಾ. 10 (DaijiworldNews/SM): ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿಮ್ಮೆಟ್ಟಿ ಆಮ್ ಆದ್ಮಿ ಭರ್ಜರಿ ಗೆಲುವು ದಾಖಲಿಸಿದೆ. ಈ ಹಿನ್ನೆಲೆ ನೂತನ ಸಿಎಂ ಆಗಿ ಭಗವಂತ್ ಮಾನ್ ಅವರು ಅಧಿಕಾರಕ್ಕೇರಲಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ನವಾನ್ಶಹರ್ ಜಿಲ್ಲೆಯ ಖಟ್ಕರ್ಕಲನ್ನಲ್ಲಿ ಪ್ರಮಾಣ ವಚನ ಸಮಾರಂಭ ಜರಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಆದರೆ, ದೀನಾಂಕ ಇನ್ನಷ್ಟೇ ನಿಗಧಿಯಾಗಬೇಕಾಗಿದೆ.
ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಮಾಣ ವಚನ ಸ್ವೀಕಾರ ಸಮಾರಂಭ ರಾಜಭವನದಲ್ಲಿ ನಡೆಯುವ ಬದಲು ಖಟ್ಕರ್ಕಲನಲ್ಲಿ ನಡೆಸಲಾಗುವುದು ಎಂದಿದ್ದಾರೆ.
ಯಾವುದೇ ಸರ್ಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಭಾವಚಿತ್ರ ಹಾಕುವುದಿಲ್ಲ. ಬದಲಾಗಿ ಸರ್ಕಾರಿ ಕಚೇರಿಗಳ ಗೋಡೆಗಳ ಮೇಲೆ ಭಗತ್ ಸಿಂಗ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಫೋಟೋಗಳನ್ನು ಹಾಕಲಾಗುವುದು ಎಂದು ಮಾನ್ ತಿಳಿಸಿದ್ದಾರೆ.