ಹಾಸನ, ಮಾ 11(DaijiworldNews/MS): ಬೆಳ್ಳಂಬೆಳಗ್ಗೆ ಕಾಫಿ ತೋಟದಲ್ಲಿ ಕೆಲಸದಲ್ಲಿ ಮಗ್ನರಾಗಿದ್ದ ವೇಳೆ ದಾಳಿ ಮಾಡಿದ ಕಾಡಾನೆ ಇಬ್ಬರನ್ನು ಬಲಿ ಪಡೆದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಇನ ಕಡೆಗರ್ಜೆ ಗ್ರಾಮದಲ್ಲಿ ನಡೆದಿದೆ.
ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಯ್ಯ(60), ಈರಯ್ಯ (50) ಅವರ ಮೇಲೆ ಕಾಡಾನೆ ದಾಳಿ ಮಾಡಿ ಸೊಂಡಿಲಿನಿಂದ ಹೊಡೆದು , ತುಳಿದ ಕಾರಣ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಬ್ಬರನ್ನು ಬಲಿ ಪಡೆಯುವ ಮೂಲಕ ಕೂಲಿ ಕಾರ್ಮಿಕರು ಕಾಫಿ ತೋಟದ ಕೆಲಸಕ್ಕೆ ಹೋಗದಂತೆ ಭಯಗೊಳಿಸಿವೆ. ಘಟನೆಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಅರಣ್ಯ ಇಲಾಖೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.