ಬೀದರ್, ಮಾ 11(DaijiworldNews/MS): ರಾಶಿ ಯಂತ್ರಕ್ಕೆ ಸಿಲುಕಿದ ಪರಿಣಾಮ ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆಯೋರ್ವಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೀದರ್ ತಾಲೂಕಿನ ಕುರನಳ್ಳಿ ಗ್ರಾಮದಲ್ಲಿ ನಡೆದಿದೆ.
27 ವರ್ಷದ ಸುವರ್ಣ ಬಾಲಾಜಿ ಚಿಕಲೆ ಎಂಬ ಮಹಿಳೆ ಮೃತ ದುರ್ದೈವಿಯಾಗಿದ್ದು, ಟ್ರಾಕ್ಟರ್ ಚಾಲಕನ ನಿರ್ಲಕ್ಷ್ಯವೇ ಮಹಿಳೆಯ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.
ರಾಶಿ ಬಳಿಕ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದಾಗಿ ಒಮ್ಮೆಲೇ ಗಾಡಿ ಮುಂದಕ್ಕೆ ಚಲಿಸಿದ್ದು ಈ ವೇಳೆ ಸುವರ್ಣಗೆ ವಾಹನ ತಗುಲಿ ರಾಶಿ ಯಂತ್ರದ ಪಾಯಿಂಟ್ನಲ್ಲಿ ಸಿಲುಕಿದ್ದಾರೆ.
ಕೂಲಿ ಕೆಲಸಕ್ಕೆ ಬಂದಿದ್ದ ಸುವರ್ಣ ಬಾಲಾಜಿ ಚಿಕಲೆ ಅವರ ಕೂದಲು ಟ್ರ್ಯಾಕ್ಟರ್ ಜಾಯಿಂಟ್ಗೆ ಸಿಲುಕಿ ಕುತ್ತಿಗೆಗೆ ಭಾಗಕ್ಕೆ ಗಾಯವಾಗಿ ದೇಹದಿಂದ ರುಂಡ ಬೇರ್ಪಟ್ಟು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದೀಗ ಪತಿ ಬಾಲಾಜಿ ನೀಡಿದ ದೂರಿನ ಮೇಲೆ ಜನವಾಡ ಪೊಲೀಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.