ಬೆಂಗಳೂರು, ಮಾ 11 (DaijiworldNews/DB): ಸಿದ್ಧರಾಮಯ್ಯ ಕಾಂಗ್ರೆಸ್ ಗೆ ಶನಿ ಎಂಬುದಾಗಿ ಜನಾರ್ದನ ಪೂಜಾರಿಯವರು ಹೇಳಿದ್ದ ಮಾತನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂಬುದಾಗಿ ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿದೆ.
ಸಿಧು ಮತ್ತು ಚನ್ನಿ ನಡುವಿನ ಆಂತರಿಕ ಕಲಹದಿಂದಾಗಿ ಪಂಜಾಬ್ ನಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಇತ್ತ ಕರ್ನಾಟಕದಲ್ಲಿ ಸಿದ್ಧರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ನಡುವಿನ ಕಲಹದಿಂದಾಗಿ ಕಾಂಗ್ರೆಸ್ ವಿಪಕ್ಷ ಸ್ಥಾನವನ್ನಷ್ಟೇ ಭದ್ರಪಡಿಸಿಕೊಳ್ಳಲಿದೆ. ಸಿದ್ಧರಾಮಯ್ಯ ಅವರು ಕಾಂಗ್ರೆಸ್ ಗೆ ಶನಿ ಎಂಬುದಾಗಿ ಪೂಜಾರಿಯವರು ಹೇಳಿದ್ದರು ಎಂಬುದಾಗಿ ಬಿಜೆಪಿ ಟ್ವೀಟ್ ಮಾಡಿದೆ.
ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ನಂತರವೂ ಸುರಕ್ಷಿತ ಕ್ಷೇತ್ರ ಹುಡುಕುತ್ತಿರುವ ಸಿದ್ಧರಾಮಯ್ಯ ಅವರಿಗೆ ಯಾವುದಾದರೂ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆಯೇ ಎಂದು ಪ್ರಶ್ನಿಸಿದ ಬಿಜೆಪಿ, ಸರಣಿ ಟ್ವೀಟ್ ಮಾಡಿ ಬಿಜೆಪಿ ಬಗ್ಗೆ ದೂರುವ ಬದಲು ಕಾಂಗ್ರೆಸ್ ಸಾಧನೆಗಳನ್ನು ಹೇಳಿ ಎಂದು ತಿಳಿಸಿದೆ.