ಚಂಡೀಗಡ, ಮಾ 11(DaijiworldNews/MS): ಆಡಳಿತ ಪಕ್ಷವಾಗಿದ್ದ ಕಾಂಗ್ರೆಸ್ ಗೆ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೆ ಕೈ ಮುಖಂಡ ಹಾಗೂ ಹಾಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಇಂದು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ರನ್ನು ಭೇಟಿ ಮಾಡಿ ತಮ್ಮ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ. ಚಂಡೀಗಢದಲ್ಲಿರುವ ರಾಜ್ಯಪಾಲರ ಅಧಿಕೃತ ನಿವಾಸಕ್ಕೆ ಸಿಎಂ ಚನ್ನಿ ಆಗಮಿಸಿ ಚನ್ನಿ ರಾಜಿನಾಮೆ ನೀಡಿದ್ದಾರೆ .
ಪಂಜಾಬ್ನ ಚುನಾವಣೆ ಫಲಿತಾಂಶದಲ್ಲಿ ಆಮ್ ಆದ್ಮಿ ಪಕ್ಷ ಕ್ಲೀನ್ ಸ್ವಿಪ್ ಸಾಧನೆ ಮಾಡಿದ ಬಳಿಕ, ಶುಕ್ರವಾರ ಬೆಳಗ್ಗೆ 11:30ಕ್ಕೆ ಚಂಡೀಗಢದ ಪಂಜಾಬ್ ಸಿವಿಲ್ ಸೆಕ್ರೆಟರಿಯೇಟ್ನಲ್ಲಿ ಪಂಜಾಬ್ ಸಂಪುಟ ಸಭೆ ನಡೆಯಿತು. ಇದಾದ ನಂತರ ಚೆನ್ನಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಚಮ್ಕೌರ್ ಸಾಹಿಬ್ ಮತ್ತು ಭದೌರ್ ಎಂಬ ಎರಡು ಕ್ಷೇತ್ರಗಳಿಂದ ಚುನಾವಣೆ ಎದುರಿಸಿದ್ದ ಚನ್ನಿ ಎರಡೂ ಕ್ಷೇತ್ರದಲ್ಲಿ ಸೋಲಿಸಿದ್ದಾರೆ.