ಲಕ್ನೋ, ಮಾ 11 (DaijiworldNews/HR): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ)ದ ಸೋಲು ನಮಗೆ ಪಾಠ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಡಿದ ಅವರು, ಬಿಎಸ್ಪಿಯು 'ಬಿಜೆಪಿಯ ಬಿ ಟೀಂ' ಅಲ್ಲ ಎಂಬುದು ಸ್ಪಷ್ಟವಾಗಿದೆ ಮತ್ತು ನಕಾರಾತ್ಮಕ ಪ್ರಚಾರಗಳು ರಾಜ್ಯದ ಜನರನ್ನು ದಾರಿ ತಪ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದರು.
ಇನ್ನು 2007ರಲ್ಲಿ ಉತ್ತರ ಪ್ರದೇಶದಲ್ಲಿ ಪೂರ್ಣ ಬಹುಮತದ ಸರ್ಕಾರವನ್ನು ರಚಿಸಿದ ಬಿಎಸ್ಪಿ ಈ ಬಾರಿ 12.88 ಶೇಕಡಾ ಮತಗಳೊಂದಿಗೆ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಪಕ್ಷದ ಕಾರ್ಯಕರ್ತರಿಗೆ ನಿರಾಶೆಗೊಳ್ಳಬೇಡಿ ಆದರೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಬಿಎಸ್ಪಿಯ ಆಂದೋಲನವನ್ನು ಮುಂದುವರಿಸಲು ತಮ್ಮ ಪ್ರಯತ್ನಗಳನ್ನು ಮುಂದುವರಿಸಬೇಕು ಎಂದಿದ್ದಾರೆ.