ಪಂಜಾಬ್, ಮಾ 11(DaijiworldNews/MS): ಆಮ್ ಆದ್ಮಿ ಪಕ್ಷವು ಕಾಂಗ್ರೆಸ್ನಿಂದ ಪಂಜಾಬ್ ನಲ್ಲಿ ಭಾರೀ ಜನಾದೇಶದೊಂದಿಗೆ ಅಧಿಕಾರ ಕಸಿದುಕೊಂಡ ಬೆನ್ನಲ್ಲೇ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದಲ್ಲಿ 4.5 ವರ್ಷಗಳ ಜನ ವಿರೋಧಿ ಆಡಳಿತದಿಂದಾಗಿ ತಮ್ಮ ಪಕ್ಷವು ಸೋತಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, "ಕಾಂಗ್ರೆಸ್ ನಾಯಕತ್ವವು ಎಂದಿಗೂ ಬುದ್ದಿ ಕಲಿಯಲ್ಲ" ಎಂದು ತಿರುಗೇಟು ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಯಾರು ಹೊಣೆ? ಮಣಿಪುರ, ಗೋವಾ, ಉತ್ತರಾಖಂಡದ ಸೋಲಿನ ಬಗ್ಗೆ ಏನು ಹೇಳುತ್ತೀರಿ ?
ಉತ್ತರವನ್ನು ಗೋಡೆಯ ಮೇಲೆ ಬೋಲ್ಡ್ ಅಕ್ಷರಗಳಲ್ಲಿ ಬರೆಯಲಾಗಿದೆ ಆದರೆ ಅದನ್ನು ಓದುವುದನ್ನು ಕಾಂಗ್ರೆಸ್ ನಾಯಕರು ತಪ್ಪಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ, ”ಎಂದು ಅವರು ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ.
ಸಿಂಗ್ ಅವರು ಪಟಿಯಾಲ ನಗರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಜಿತ್ ಪಾಲ್ ಸಿಂಗ್ ಕೊಹ್ಲಿ ವಿರುದ್ಧ ಸೋತಿದ್ದು, ಅವರ ಪಕ್ಷವು ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು.. ಆದರೂ ಒಂದೇ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು.