ಚಂಡೀಗಡ, ಮಾ 15 (DaijiworldNews/DB): ಪಂಜಾಬ್ನ ನಿಯೋಜಿತ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಭಗವಂತ ಮಾನ್ ಅವರು ಸಂಸದ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಲೋಕಸಭಾ ಸಭಾಪತಿ ಓಂ ಬಿರ್ಲಾ ಮಂಗಳವಾರ ಅಂಗೀಕರಿಸಿದ್ದಾರೆ.
ಮಾನ್ ಅವರು, ಸೋಮವಾರ ಲೋಕಸಭಾ ಸಭಾಪತಿ ಓಂ ಬಿರ್ಲಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ಅಂಗೀಕಾರದ ಬಗ್ಗೆ ಟ್ವೀಟ್ ಮಾಡಿರುವ ಬಿರ್ಲಾ ಅವರು, ’ಮಾ.14 ರಿಂದಲೇ ಜಾರಿಗೆ ಬರುವಂತೆ ಮಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ' ಎಂದು ಬರೆದಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಸ್ವಗ್ರಾಮ ಖಟಕಡಕಲಾನ್ನಲ್ಲಿ ಮಾರ್ಚ್ 16 ರಂದು ಮಧ್ಯಾಹ್ನ 12.30ಕ್ಕೆ ಪಂಜಾಬ್ನ 17ನೇ ಮುಖ್ಯಮಂತ್ರಿಯಾಗಿ ಮಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.