ನವದೆಹಲಿ, ಮಾ. 15 (DaijiworldNews/SM): ರಷ್ಯಾ-ಉಕ್ರೇನ್ ನಡುವೆ ಉಂಟಾಗಿರುವ ಹಿನ್ನೆಲೆಯಲ್ಲಿ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಾಗುವ ಭೀತಿ ಹಿನ್ನೆಲೆ ತೈಲ ಪೂರೈಕೆಗೆ ರಷ್ಯಾದೊಂದಿಗೆ ಮಾತುಕತೆ ನಡೆಸಿ ರಿಯಾಯಿತಿ ದರದಲ್ಲಿ ಖರೀದಿಸಲಾಗುವುದು ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಯುದ್ಧದ ಕಾರಣದಿಂದಾಗಿ ರಷ್ಯಾದ ವಿರುದ್ಧ ಹಲವು ಪಾಶ್ಚಿಮಾತ್ಯ ದೇಶಗಳು ನಿರ್ಬಂಧ ಹೇರಿದೆ. ಸದ್ಯ ಆರ್ಥಿಕ, ವಾಣಿಜ್ಯ ಬಿಕ್ಕಟ್ಟು ಎದುರಿಸುತ್ತಿರುವ ರಷ್ಯಾ ಭಾರತಕ್ಕೆ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಪೂರೈಸುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಈ ಬಗ್ಗೆ ಮಾತುಕತೆ ನಡೆಸುತ್ತಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಹೇಳಿದ್ದಾರೆ.
ರಷ್ಯಾದಿಂದ ಕಚ್ಚಾ ತೈಲ ಖರೀದಿಗೆ ಸಂಬಂಧಿಸಿದಂತೆ "ರಷ್ಯಾ ಒಕ್ಕೂಟದ" ಜೊತೆ ಸಂಬಂಧಪಟ್ಟವರೊಂದಿಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.