ಬೆಂಗಳೂರು, ಮಾ 16 (DaijiworldNews/MS): ಹಿಜಾಬ್ ಧರಿಸಿವುದು ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ಸಂಹಿತೆ ಕುರಿತಾಗಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಇದನ್ನು ಪ್ರಶ್ನಿಸುವಂತಿಲ್ಲ ಎಂದು ಹಿಜಾಬ್ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿ ನೀಡಿದ್ದ ಹೈಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ಹೊರ ಹಾಕಿರುವ ಅಮೀರ್-ಇ-ಶರಿಯತ್ ನಾಳೆ ಮಾರ್ಚ್ 17ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ತ್ರಿ ಸದಸ್ಯ ನ್ಯಾಯಪೀಠವೂ , ಫೆಬ್ರವರಿ 5ರಂದು ಹೊರಡಿಸಿದ್ದ ಸರ್ಕಾರದ ಏಕರೂಪ ಸಮವಸ್ತ್ರ ಕಡ್ಡಾಯ ಆದೇಶವನ್ನು ಎತ್ತಿ ಹಿಡಿದಿದ್ದು, ಕಾನೂನುಬದ್ಧವಾಗಿದೆ ಎಂದು ಒಟ್ಟು 129 ಪುಟಗಳ ತೀರ್ಪು ಪ್ರಕಟಿಸಿತ್ತು.
ಕೋರ್ಟ್ ತೀರ್ಪು ನಿರಾಶಾದಾಯಕವಾಗಿದ್ದು, ನಾಳೆ ಶಾಂತಿಯುತವಾಗಿ ಬಂದ್ ನಡೆಸಬೇಕು ಎಂದು ಅಮೀರ್-ಇ-ಶರಿಯತ್ ಮುಖಂಡ ಮೌಲಾನಾ ಸಗೀರ್ ಅಹಮದ್ ಕರೆ ನೀಡಿದ್ದು, ಈ ಸಂದರ್ಭ ಬಲವಂತದ ಬಂದ್ ಅಥವಾ ಜಾಥಾ , ಮೆರವಣಿಗೆ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.