ಬೆಂಗಳೂರು, ಮಾ 22 (DaijiworldNews/MS): ಕಳೆದ ನಾಲ್ಕು ತಿಂಗಳುಗಳಿಂದ ಸ್ಥಿರವಾಗಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಂಡಿದೆ. ಪಂಚ ರಾಜ್ಯದಲ್ಲಿ ಚುನಾವಣೆ ನಡೆಯುವವರೆಗೆ ಸುಮ್ಮನಿದ್ದರು. ಈಗ ಏಕಾಏಕಿ ಪೆಟ್ರೋಲ್ ಮತ್ತು ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ. ಹೀಗಾಗಿ ಜನ ಹಣ ಕೊಳ್ಳೆ ಹೊಡೆಯುವ ಪಿಕ್ ಪಾಕೇಟರ್ಸ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ಮಾಡಿದರು.
ಮಾಧ್ಯಮದೊಂದಿಗೆ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ನಿಲುವಿನ ಕುರಿತಾಗಿ ಮತದಾರರು ತಾಳ್ಮೆ ಕಳೆದುಕೊಂಡಿದ್ದಾರೆ ಚುನಾವಣೆಯವರೆಗೆ ಸುಮ್ಮನಿದ್ದರು. ಆದರೆ ಇದೀಗ ಪೆಟ್ರೋಲ್ ಮತ್ತು ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ. ಜನಸಾಮಾನ್ಯರ ಆದಾಯ ಹೆಚ್ಚಾಗುತ್ತಿಲ್ಲ, ಆದರೆ ಅಗತ್ಯ ವಸ್ತುಗಳ ಬೆಲೆ ಮಾತ್ರ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಯಾವುದೇ ಕಾರಣಕ್ಕೂ ಮಾಡಬಾರದು. ಡಬಲ್ ಇಂಜಿನ್ ಸರ್ಕಾರ ಎಂದು ಹೇಳುತ್ತಿದ್ದರಲ್ವಾ ಈಗ ಸರ್ಕಾರವೇ ಬೆಲೆ ಏರಿಕೆಯ ವೆಚ್ಚ ಭರಿಸಲಿ ಎಂದು ಒತ್ತಾಯಿಸಿದರು.
ಜನರ ಜೇಬಿಗೆ ಕನ್ನ ಹಾಕುವ ಪಿಕ್ ಪಾಕೆಟ್ ಸರ್ಕಾರ ವಿದು ಹೀಗಾಗಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಸರ್ಕಾರ ಇಳಿಕೆ ಮಾಡುವವರೆಗೂ ಪಿಕ್ ಪಾಕೇಟರ್ಸ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಈ ವೇಳೆ ಹೇಳಿದರು.