ಬೆಂಗಳೂರು, ಮಾ 29 (DaijiworldNews/DB): ಅಕ್ರಮ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಐಡಿ ರವಿ ಚೆನ್ನಣ್ಣನವರ್ ವಿರುದ್ದ ತನಿಖೆ ನಡೆಸಲು ಸಿಬಿಐ ಅಥವಾ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಬೇಕು ಎಂದು ಕೋರಿ ವಕೀಲ ಕೆ.ಎನ್. ಜಗದೀಶ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ರವಿ ಚೆನ್ನಣ್ಣನವರ್ ಅವರು ಕೋಟ್ಯಾಂತರ ರೂ. ಆಸ್ತಿಯನ್ನು ಅಕ್ರಮವಾಗಿ ತಮ್ಮ ಪೋಷಕರ ಹೆಸರಿನಲ್ಲಿ ಹೊಂದಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲು ಸಿಬಿಐ ಅಥವಾ ಇಡಿಗೆ ಸೂಚನೆ ನೀಡಬೇಕು ಎಂದವರು ಹೈಕೋರ್ಟ್ಗೆ ಕೋರಿದ್ದಾರೆ. ಆದರೆ ಅರ್ಜಿ ವಿಚಾರಣೆ ಇನ್ನಷ್ಟೆ ನಡೆಯಬೇಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಚೆನ್ನಣ್ಣನವರ್ ಸಹಿತ ರಾಜ್ಯ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ, ಸಿಬಿಐ-ಇಡಿ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.