ಬೆಂಗಳೂರು, ಏ 12 (DaijiworldNNews/HR): ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ವ್ಯವಸ್ಥಿತ ಷಡ್ಯಂತ್ರವಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೆಣುಕಾಚಾರ್ಯ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವಿನ ಮನೆಯಲ್ಲಿ ಯಾರೊಬ್ಬರೂ ಕೂಡ ರಾಜಕಾರಣ ಮಾಡಬಾರದು. ಅದು ಕಾಂಗ್ರೆಸ್ ಇರಲಿ, ಬಿಜೆಪಿ ಇರಲಿ. ಸತ್ತವರ ಕುಟುಂಬಕ್ಕೆ ಸಾಂತ್ವನ ಹೇಳಬೇಕು ಎಂದರು.
ಇನ್ನು 40% ಕಮೀಷನ್ ತೆಗೆದುಕೊಂಡರೆ 20% ರಾಜಧನ ಕಟ್ಟಬೇಕು. ಅಲ್ಲಿಗೆ 60% ಹೋಗುತ್ತದೆ. ಇನ್ನು ಉಳಿದ 40% ನಲ್ಲಿ ಕಾಮಗಾರಿ ನಡೆಸಲು ಸಾಧ್ಯವೇ? ಇದನ್ನು ಯಾರಾದರೂ ನಂಬುತ್ತಾರೆಯೇ ಎಂದು ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.
ಸರ್ಕಾರಕ್ಕೆ ಕೆಟ್ಟ ತರಬೇಕು ಎಂಬ ಕಾರಣಕ್ಕಾಗಿಯೇ ಕಾಂಗ್ರೆಸ್ ನಾಯಕರು ಸುಳ್ಳು ಆರೋಪಗಳನ್ನು ಮಾಡಿದ್ದು, ನಮ್ಮದು 40% ಕಮೀಷನ್ ಸರ್ಕಾರ ಎನ್ನಲು ಕಾಂಗ್ರೆಸಿಗರು ಸತ್ಯ ಹರಿಶ್ಚಂದ್ರರೇ ಎಂದು ವಾಗ್ದಾಳಿ ನಡೆಸಿದ್ದಾರೆ.