ರಾಮನಗರ, ಏ 13 (DaijiworldNews/HR): ಕರ್ನಾಟಕದಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಟ್ರೆಂಡ್ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಜೆಡಿಎಸ್ ಮುಳುಗೆ ಹೋಯ್ತು ಎಂದು ಹೇಳುತ್ತಿದ್ದರು. ಆದರೆ ಈಗ ಅನೇಕ ಸಂಘ ಸಂಸ್ಥೆಗಳು, ಕಾರ್ಯಕರ್ತರು ನಮಗೆ ಬೆಂಬಲ ನೀಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಲ್ಲಿ ಗೆಲ್ಲುವಂತ ನಾಯಕರನ್ನು ರಾಷ್ಟ್ರೀಯ ಪಕ್ಷಗಳು ಅವರ ಪಕ್ಷಕ್ಕೆ ಸೆಳೆಯಲು ಮುಂದಾಗ್ತಿದ್ದಾರೆ ಎಂದರು.
ಇನ್ನು ಎರಡು ಪಕ್ಷದ ನಾಯಕರು ನಮ್ಮ ಪಕ್ಷದ ಮುಖಂಡರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದು, ಈ ಹಿಂದೆ ನಮ್ಮ ಪಕ್ಷ ಬಿಟ್ಟು ಹೋದ ಶಾಸಕರ ಕ್ಷೇತ್ರಗಳಲ್ಲಿ ಈಗಾಗಲೇ ಪರ್ಯಾಯ ನಾಯಕರನ್ನು ಕಾರ್ಯಕರ್ತರು ಸೃಷ್ಟಿಮಾಡಿದ್ದಾರೆ ಎಂದಿದ್ದಾರೆ.
ಕರ್ನಾಟಕದಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಟ್ರೆಂಡ್ ಈಗ ಸೃಷ್ಟಿಯಾಗಿದ್ದು, ನನ್ನ ಈಗಿನ ನಿಲುವಿನ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.