ಸೊರಬ, ಏ 14 (DaijiworldNews/DB): ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ವಿಚಾರವಾಗಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮೇಲಿನ ಆರೋಪದ ಕುರಿತು ಪ್ರತಿಕ್ರಿಯಿಸಲು ಸಂಸದ ಬಿ.ವೈ. ರಾಘವೇಂದ್ರ ನಿರಾಕರಿಸಿದ್ದಾರೆ.
ಸೊರಬ ತಾಲೂಕಿನ ಉದ್ರಿ ಗ್ರಾಮದಲ್ಲಿ ಸುದ್ದಿಗಾರರು ಅವರನ್ನು ಗುರುವಾರ ಪ್ರಶ್ನಿಸಿದಾಗ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕ ವಾಸ್ತವಾಂಶ ಗೊತ್ತಾಗಲಿದೆ. ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.
ಸಚಿವರ ಮೇಲಿನ ಆರೋಪದ ಕುರಿತು ತನಿಖೆ ನಡೆಯಲಿದೆ. ಪಕ್ಷದ ವರಿಷ್ಠರು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.