ಥಾಣೆ, ಏ 15 (DaijiworldNews/HR): ಮಹಾರಾಷ್ಟ್ರದ ಥಾಣೆಯಲ್ಲಿ ಟೀ ಜೊತೆಗೆ ಬೆಳಗಿನ ಉಪಾಹಾರ ಕೊಡಲಿಲ್ಲ ಎಂದು ಕೋಪಗೊಂಡ ಮಾವ ಸೊಸೆಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಟೀ ಜೊತೆಗೆ ಬೆಳಗಿನ ಉಪಾಹಾರ ಕೊಡಲಿಲ್ಲ ಎಂಬ ಕಾರಣಕ್ಕೆ ಸೊಸೆಗೆ ಗುಂಡು ಹಾರಿಸಿರುವ ಆರೋಪಿಯನ್ನು ಕಾಶಿನಾಥ ಪಾಂಡುರಂಗ ಪಾಟೀಲ (76) ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಬಂಧಿಸಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆ ಯತ್ನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಅಪರಾಧವನ್ನು ದಾಖಲಿಸಲಾಗಿದೆ.
ಗಾಯಗೊಂಡ ಸೊಸೆಯನ್ನು ಚಿಕಿತ್ಸೆಗಾಗಿ ನಗರದ ಆಸ್ಪತ್ರೆಗೆ ದಾಖಲಿಸಲಾಗಿ ಎಂದು ಆರೋಪಿಯ ಮತ್ತೊಬ್ಬ ಸೊಸೆ ಪೊಲೀಸರಿಗೆ ತಿಳಿಸಿದ್ದಾರೆ.