ಹೊಸಪೇಟೆ, ಏ 17 (DaijiworldNews/DB): ಹುಬ್ಬಳ್ಳಿಯಲ್ಲಿ ತಡರಾತ್ರಿ ಘಟಿಸಿದ ಕಲ್ಲು ತೂರಾಟ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆಪಾದನೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಕೇಸರಿ ಧ್ವಜ ಶಾಂತಿಯ ಸಂಕೇತ. ಇದನ್ನು ಮಸೀದಿ ಮೇಲೆ ಹಾರಿಸಿರುವುದರಲ್ಲಿ ಏನು ತಪ್ಪಿದೆ ಎಂದು ಪ್ರಶ್ನಿಸಿದರು.
ಪಾಕಿಸ್ತಾನದಲ್ಲಿ ದೇವಳಗಳ ಮೇಲೆ ಹಸಿರು ಧ್ವಜ ಇರುತ್ತದೆ. ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿದರಲ್ಲಿ ತಪ್ಪೇನಿಲ್ಲ. ಪೊಲೀಸ್ ಠಾಣೆ ಸನಿಹದಲ್ಲಿ ಬಂದು ಗಲಾಟೆ ಮಾಡುವುದು ಉತ್ತಮ ಬೆಳವಣಿಗೆಯಲ್ಲ. ಈ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಇಂತಹ ಘಟನೆಗಳು ಮುಂದುವರೆದರೆ ಹಿಂದೂಗಳು ಸುಮ್ಮನಿರುವುದಿಲ್ಲ ಎಂದರು.