ಗುಜರಾತ್, ಏ 21 (DaijiworldNews/HR): ಗೋಡ್ಸೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ದೇವರಂತೆ ಕಾಣುತ್ತಾರೆ ಎಂದು ಟ್ವೀಟ್ ಮಾಡಿದ್ದ ಗುಜರಾತಿನ ವಡಗಾಂವ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಕ್ರಾಜರ್ ಜಿಲ್ಲೆಯ ಭವಾನಿಪುರ ನಿವಾಸಿ ಅನುಪ್ ಕುಮಾರ್ ಡೇ ಎಂಬವರು ನೀಡಿದ ದೂರಿನನ್ವಯ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಗ್ನೇಶ್ ಅವರು ಬನಸ್ಕಂತ್ ನ ಪಲನ್ಪೂರ್ ಸರ್ಕಿಟ್ ಹೌಸ್ ನಲ್ಲಿ ಇದ್ದ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಈ ವೇಳೆ ಪೊಲೀಸರು ಯಾವುದೇ ದಾಖಲೆ ಪತ್ರಗಳನ್ನು ನೀಡಲಿಲ್ಲ ಎಂದು ಜಿಗ್ನೇಶ್ ಮೇವಾನಿ ಅವರ ಸಹವರ್ತಿಗಳು ಆರೋಪಿಸಿದ್ದಾರೆ.
ಇನ್ನು ಜಿಗ್ನೇಶ್ ಅವರು ಮಾಡಿರುವ ಟ್ವೀಟ್ ನಿಂದ ಸಮಾಜದ ಸಾಮರಸ್ಯ ಹಾಳಾಗುವುದ ಜೊತೆಗೆ ಕೋಮು ಸಂಘರ್ಷವನ್ನು ಉಂಟುಮಾಡುತ್ತದೆ ಎಂದು ಅನುಪ್ ಕುಮಾರ್ ಡೇ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.