ಬೆಂಗಳೂರು, ಏ 21 (DaijiworldNews/HR): ದೇಶದಲ್ಲಿ ಲಫಂಗರು, ಗೂಂಡಾಗಳು, ಒಂದೇ ಪಕ್ಷವನ್ನು ಸೇರುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ರೈತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯು ದೇಶದ ಎಲ್ಲೆಡೆ ದಂಗೆ, ಹಿಂಸಾಚಾರಗಳನ್ನು ಮಾಡಿಸುತ್ತಿದ್ದು, ಗೂಂಡಾಗಳ ಸರ್ಕಾರ ನಿಮಗೆ ಬೇಕೆ ಎಂದು ಪ್ರಶ್ನಿಸಿದ್ದಾರೆ.
ಇನ್ನು ಗೂಂಡಾಗಳಿಗೆ ಬಿಜೆಪಿಯಲ್ಲಿ ಗೌರವ, ಸ್ಥಾನಮಾನ ದೊರೆಯುತ್ತದೆ ಎಂದು ಆರೋಪಿಸಿರುವ ಅವರು, ನಿಮಗೆ ಗೂಂಡಾಗಳ, ಲಫಂಗರ ಸರ್ಕಾರ ಬೇಕೆ ಅಥವಾ ಪ್ರಾಮಾಣಿಕ ಆಡಳಿತ ನೀಡುವ ಸರ್ಕಾರ ಬೇಕೆ ? 40% ಸರ್ಕಾರವನ್ನು ಧಿಕ್ಕರಿಸಿ, ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸಿ ಎಂದು ಕರೆ ನೀಡಿದ್ದಾರೆ.
ಕರ್ನಾಟಕದಲ್ಲಿ ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರ 20% ಕಮಿಷನ್ ಸರ್ಕಾರ ಎಂದು ಹೆಸರಾಗಿದ್ದು, ಈಗಿನ ಬಿಜೆಪಿ ಸರ್ಕಾರ 40% ಸರ್ಕಾರ ಎಂದು ಹೆಸರಾಗಿದೆ. ಇವರನ್ನೆಲ್ಲ ಈಗ ಮನೆಗೆ ಕಳುಹಿಸುವ ಕಾಲ ಹತ್ತಿರವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.