ಹೈದರಾಬಾದ್, ಏ 26 (DaijiworldNews/HR): ಆಂಬ್ಯುಲೆನ್ಸ್ ವ್ಯವಸ್ಥೆ ಸಿಗದೆ ತಿರುಪತಿಯ ವ್ಯಕ್ತಿಯೊಬ್ಬರು ತಮ್ಮ ಮಗನ ಮೃತದೇಹವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸಿರುವ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಾಲಕನ ತಂದೆ ಮೃತದೇಹವನ್ನು ಶವಸಂಸ್ಕಾರಕ್ಕಾಗಿ ತನ್ನ ಗ್ರಾಮಕ್ಕೆ ಸ್ಥಳಾಂತರಿಸಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ಪ್ರಯತ್ನಿಸಿದಾಗ, ಆಂಬ್ಯುಲೆನ್ಸ್ ಚಾಲಕ ಮತ್ತು ಕರ್ತವ್ಯದಲ್ಲಿದ್ದ ಆಸ್ಪತ್ರೆ ಸಿಬ್ಬಂದಿ ಭಾರಿ ಮೊತ್ತದ ಬೇಡಿಕೆಯಿಟ್ಟಿದ್ದು, ಕುಟುಂಬವು ಬಡತನವಾಗಿರುವುದರಿಂದ ಮತ್ತು ಭಾರಿ ಶುಲ್ಕವನ್ನು ಭರಿಸಲು ಸಾಧ್ಯವಾಗದ ಕಾರಣ ಶವವನ್ನು ದ್ವಿಚಕ್ರ ವಾಹನದಲ್ಲಿ ತಮ್ಮ ಗ್ರಾಮಕ್ಕೆ ಸ್ಥಳಾಂತರಿಸಿದ್ದಾರೆ.
ಇನ್ನು ಈ ಘಟನೆಯ ವೀಡಿಯೊವನ್ನು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಟ್ವೀಟ್ ಮಾಡಿದ್ದಾರೆ.