ನವದೆಹಲಿ, ಏ 29 (DaijiworldNews/HR): ಕಾಂಗ್ರೆಸ್ ಪಕ್ಷಕ್ಕೆ ಪಂಜಾಬ್ನಲ್ಲಿ ಉಂಟಾಗಿರುವ ಹಿನ್ನಡೆ ರಾಜಸ್ಥಾನದಲ್ಲಿ ಬರಬಾರದೆಂದರೆ, ತಕ್ಷಣ ನನ್ನನ್ನು ಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಿ ಎಂದು ಕಾಂಗ್ರೆಸ್ ಶಾಸಕ ಸಚಿನ್ ಪೈಲೆಟ್ ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ಸೋನಿಯಾ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವನ್ನು ಭೇಟಿ ಮಾಡಿ ಮಾತನಾಡಿರುವ ಸಚಿನ್ ಪೈಲೆಟ್, ತಕ್ಷಣ ನನ್ನನ್ನು ಮುಖ್ಯಮಂತ್ರಿ ಸ್ಥಾನಕ್ಕೆ ನೇಮಕ ಮಾಡಿ. 2023ರ ಡಿಸೆಂಬರ್ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರ ಉಳಿಸಬೇಕೆಂದಿದ್ದರೆ ಈ ಕ್ರಮ ಅನಿವಾರ್ಯ ಎಂದಿದ್ದಾರೆ.
ಇನ್ನು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷ ಮತ್ತು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಕಮಲ್ನಾಥ್ ಗುರುವಾರ ರಾಜೀನಾಮೆ ನೀಡಿದ್ದು, ಅವರ ಸ್ಥಾನದಲ್ಲಿ ಶಾಸಕ ಗೋವಿಂದ ಸಿಂಗ್ ನೇಮಕವಾಗಲಿದ್ದಾರೆ.