ಬಠಿಂಡಾ, ಏ 29 (DaijiworldNews/HR): ಪಂಜಾಬ್ ರಾಜ್ಯದ ಬಠಿಂಡಾದ ಭಾಯ್ ಕಾ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮೂರು ಬಸ್ಗಳು ಬೆಂಕಿಗೆ ಆಹುತಿಯಾಗಿ ಓರ್ವ ಸಜೀವ ದಹನಗೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಮೂರು ಬಸ್ಗಳು ಬೆಂಕಿಗೆ ಆಹುತಿಯಾದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಇನ್ನು ಮೃತ ವ್ಯಕ್ತಿ ಬಸ್ ಕಂಡಕ್ಟರ್ ಆಗಿರಬಹುದು ಎಂದು ಶಂಕಿಸಲಾಗಿದ್ದು, ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.