ಜೈಪುರ, ಮೇ 05 (DaijiworldNews/HR): ಅಮಿತ್ ಶಾ ಅವರಿಗೆ ಧೈರ್ಯವಿದ್ದರೆ, ರಾಜಸ್ಥಾನದ ಕರೌಲಿ ರೀತಿ ದೇಶದ 7 ರಾಜ್ಯಗಳಲ್ಲಿ ಕಳೆದ ತಿಂಗಳು ನಡೆದ ಹಿಂಸಾಚಾರ ಘಟನೆಗಳಿಗೆ ನಿಜವಾದ ಕಾರಣವೇನು ಎಂಬುದರ ತನಿಖೆಗೆ ಸಮಿತಿ ರಚಿಸಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಸವಾಲು ಹಾಕಿದ್ದಾರೆ.
ಈ ಕುರಿತು ಮಾತನಾಡಿದ ಅವರು, ದೇಶದ 7 ರಾಜ್ಯಗಳಲ್ಲಿ ಕಳೆದ ತಿಂಗಳು ನಡೆದ ಹಿಂಸಾಚಾರಕ್ಕೆ ನಿಜವಾದ ಕಾರಣವೇನು ಎಂದು ತಿಳಿಯಲು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸಬೇಕು. ಈ ಕ್ರಮದಿಂದ ಹಿಂಸಾಚಾರಕ್ಕೆ ಕಾರಣವೇನು ಎಂಬುದು ಗೊತ್ತಾಗಲಿದೆ. ಜೊತೆಗೆ ಇಂಥ ಹಿಂಸಾಚಾರಗಳು ಮತ್ತೆ ಮರುಕಳಿಸುವುದಿಲ್ಲ ಎಂದರು.
ಇನ್ನು ಏಪ್ರಿಲ್ 2ರಂದು ಹಿಂದೂಗಳ ಹೊಸ ವರ್ಷಾಚರಣೆ ಪ್ರಯುಕ್ತ ಕರೌಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೈಕ್ ರ್ಯಾಲಿ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದು,ಈ ಘಟನೆಯಲ್ಲಿ ಹಲವು ವಾಹನಗಳು ಮತ್ತು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು.