ಬೆಂಗಳೂರು, ಮೇ 16 (DaijiworldNews/SM): ಬೆಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಜ್ಯ ಸರಕಾರ ಸೋಮವಾರದಂದು ಬೆಂಗಳೂರಿನ ಪೊಲೀಸ್ ಆಯುಕ್ತರು ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಅದರಂತೆ ಬೆಂಗಳೂರು ನಗರ ಕಮಿಷನರ್ ಆಗಿದ್ದ ಕಮಲ್ ಪಂತ್ ಅವರನ್ನು ಕೂಡ ವರ್ಗಾವಣೆ ಮಾಡಲಾಗಿತ್ತು. ಇದೀಗ ತೆರವಾಗಿರುವ ಅವರ ಸ್ಥಾನಕ್ಕೆ ನೂತನ ಆಯುಕ್ತರಾಗಿ ಪ್ರತಾಪ್ ರೆಡ್ದಿಯವರನ್ನು ನೇಮಕ ಮಾಡಲಾಗಿದೆ.
ಕಮಲ್ ಪಂತ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ಅವರನ್ನು ಸಿಐಡಿ ಎಸ್ ಪಿಯಾಗಿ ವರ್ಗಾಯಿಸಲಾಗಿದೆ.