ಬಾಗಲಕೋಟೆ, ಮೇ 21 (DaijiworldNews/MS): ಕಡ್ಡಾಯ ನಿವೃತ್ತಿ ಹೊಂದಿದ್ದ ಜಡ್ಜ್ ಗುಂಡು ಹಾರಿಸಿಕೊಂಡು ಆ4185ತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯ ನವನಗರದ ಸೆಕ್ಟರ್ ನಂ.16ರಲ್ಲಿ ತಡರಾತ್ರಿ ಸಂಭವಿಸಿದೆ.
ನ್ಯಾ. ಮಾನಪ್ಪ ತಳವಾರ(53) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡವರು.
ಕಲಬುರ್ಗಿಯ ಚಿತ್ತಾಪುರ ನ್ಯಾಯಾಲಯದಲ್ಲಿ ಜಡ್ಜ್ ಆಗಿದ್ದ ಮಾನಪ್ಪ ತಳವಾರ ಅವರು ೨ ನೇ ಮದುವೆಯಾಗಿದ್ದರು ಎಂಬ ಕಾರಣಕ್ಕೆ ಕಡ್ಡಾಯ ನಿವೃತ್ತಿಗೆ ಒಳಗಾಗಿದ್ದರು. ಮಾನಪ್ಪ ತಳವಾರ ಮೂಲತಃ ಬಾಗಲಕೋಟೆ ತಾಲ್ಲೂಕಿನ ಹಿರೆಶೆಲ್ಲಿಕೇರಿ ಗ್ರಾಮದವರಾಗಿದ್ದು, ಕಳೆದ ಮೂರು ವರ್ಷದಿಂದ ಕಡ್ಡಾಯ ನಿವೃತ್ತಿ ಮೇಲಿದ್ದು, ಮನೆಯಲ್ಲಿ ಗುಂಡು ಹಾರಿಸಿಕೊಂಡು ಅಸುನೀಗಿದ್ದಾರೆ.
ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಮೃತ ಜಡ್ಜ್ ಗೆ ಇಬ್ಬರು ಪತ್ನಿಯರು ಇದ್ದಾರೆ. ಮೊದಲ ಪತ್ನಿ ಬೆಂಗಳೂರಲ್ಲಿ ಜಡ್ಜ್ ಆಗಿದ್ದಾರೆ. ಎರಡನೇ ಪತ್ನಿ ಜೊತೆ ನವನಗರದಲ್ಲಿ ಮಾನಪ್ಪ ತಳವಾರ ನೆಲೆಸಿದ್ದರು.