ಹಾಸನ, ಮೇ 23 (DaijiworldNews/HR): ಭಗತ್ ಸಿಂಗ್ ಹಾಗೂ ನಾರಾಯಣ ಗುರುಗಳ ವಿಚಾರವನ್ನು ಪಠ್ಯದಿಂದ ಕೈಬಿಟ್ಟಿಲ್ಲ. ಕಾಂಗ್ರೆಸ್ನವರಿಗೆ ಇಷ್ಟು ದಿನ ಕೇವಲ ಗಾಂಧೀಜಿ ಮಾತ್ರ ಕಾಣುತ್ತಿದ್ದರು. ಈಗ ಭಗತ್ ಸಿಂಗ್ ಮೇಲೆ ಇದ್ದಕ್ಕಿದ್ದಂತೆ ಪ್ರೀತಿ ಯಾಕೆ? ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.
ಈ ಕುರಿರ್ತು ಮಾತನಾಡಿದ ಅವರು, ಟಿಪ್ಪುವನ್ನು ಹುಲಿ ಅನ್ನೋದಕ್ಕೆ ಒಂದೇ ಒಂದು ಕಾರಣ ಕೊಡಿ. ಸಿದ್ದರಾಮಯ್ಯನ ಬಾಯಲ್ಲಿ ಭಗತ್ ಮಾತು ಕೇಳಿ ನನಗೆ ಸೋಜಿಗ ಆಯ್ತು ಎಂದರು.
ಇನ್ನು ಟಿಪ್ಪು ಸುಲ್ತಾನ್ ಒಬ್ಬ ಹುಲಿಯು ಅಲ್ಲ ಕರಡಿಯೂ ಅಲ್ಲ. ಸಿಂಹವೂ ಅಲ್ಲ. ಆತ ಒಬ್ಬ ಕ್ರೂರಿ ಮಾತ್ರ. ಯಾವುದೇ ವ್ಯಕ್ತಿಯನ್ನು ಬಂಧಿಸಿ ನಂತರ ಆತನಿಗೆ ಚೂರಿ ಹಾಕುವುದು ಚರ್ಮ ಸುಲಿಯುವುದು ಕ್ರೌರ್ಯ ಎನಿಸಿಕೊಳ್ಳುತ್ತದೆ ಎಂದಿದ್ದಾರೆ.
ಭಾರತದ ಇತಿಹಾಸವನ್ನು ನಾವುಗಳು ಯಾವ ರೀತಿ ಬರೆದು ನೋಡಬೇಕು. ವಸ್ತು ನಿಷ್ಠವಾಗಿ ನೋಡಬೇಕಾ? ಅಥವಾ ಗಿರೀಶ್ ಕಾರ್ನಡ್ ಬರೆದಂತಹ ಟಿಪ್ಪುವಿನ ಕನಸುಗಳನ್ನು ಎಂದು ಕಾಲ್ಪನಿಕವಾದ ಪುಸ್ತಕಗಳ ರೂಪವಾಗಿ, ನಾಟಕಗಳ ರೂಪವಾಗಿ ನೋಡಬೇಕಾ? ಎಂದು ಪ್ರಶ್ನಿಸಿದ್ದಾರೆ.