ಬೆಂಗಳೂರು, ಮೇ 24 (DaijiworldNews/MS): ಪ್ರಸ್ತುತ ರಾಜ್ಯದಲ್ಲಿರುವುದು, ಗಂಡಸೂ ಅಲ್ಲ ಹೆಂಗಸೂ ಅಲ್ಲದ ಸರ್ಕಾರ , ಏನಾದರೂ ಆರೋಪ ಮಾಡಿದರೆ ಕಿಸಿಕ್ ಎಂದು ನಗಾಡ್ತಾರೆ ಹೀಗಾಗಿ 2023 ಕ್ಕೆ ಈ ಮಂಗಳಮುಖಿ ಸರ್ಕಾರ ತೆಗೆಯಬೇಕಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳೆಯರಾದರೆ ಮಹಿಳೆ ಜೊತೆ ಕಳುಹಿಸಬಹುದು, ಪುರುಷರಾದರೆ ಪುರುಷರ ಗಂಡಸರ ಜೊತೆ ಕಳುಹಿಸಬಹುದು. ಆದರೆ ಅತ್ತ ಗಂಡಸು ಅಲ್ಲದ ಇತ್ತ ಹೆಂಗಸು ಅಲ್ಲದ ಮಂಗಳಮುಖಿಯರ ಸರ್ಕಾರವಿದು. ಚಪ್ಪಾಳೆ ತಟ್ಟಿಬಿಡುತ್ತಾರೆ. ಏನಾದರೂ ಆರೋಪ ಮಾಡಿದರೆ ಕಿಸಿಕ್ ಎಂದು ನಗಾಡ್ತಾರೆ, ಏನು ಮಾಡೋಣ.ಈ ಸರ್ಕಾರದ ಜೊತೆಗೆ ಹೋರಾಡಲೂ ಆಗುವುದಿಲ್ಲ ಸುಮ್ಮನಿರಲೂ ಆಗುವುದಿಲ್ಲವಲ್ಲ. ಹೀಗಾಗಿ ರಾಜ್ಯದಲ್ಲಿ ಆದಷ್ಟು ಬೇಗ ಮಂಗಳಮುಖಿಯರ ಸರ್ಕಾರ ತೆಗೆಯಬೇಕು. ಎಂದು ಲೇವಡಿ ಮಾಡಿದರು.
ಪರಿಷತ್ ಚುನಾವಣೆ ಟಿಕೆಟ್ ಬಗ್ಗೆ ಮಾತನಾಡಿದ ಅವರು, ನಾನು ಆಕಾಂಕ್ಷಿ ಆಗಿರಲಿಲ್ಲ. ನಾನು ಪಕ್ಷದ ಅಧ್ಯಕ್ಷನಾಗಿ ಉದಾತ್ತ ಮನೋಭಾವ ತೋರಿಸಬೇಕು. ಬಡಿಸುವ ಜಾಗದಲ್ಲಿ ಇದ್ದು ನಾವೇ ಊಟ ಮಾಡಲು ಕೂತರೆ ಹೇಗೆ ಎಂದು ಪ್ರಶ್ನಿಸಿದರು.