ನವದೆಹಲಿ, ಮೇ 24 (DaijiworldNews/HR): ಶೃಂಗಾರ್ ಗೌರಿ-ಜ್ಞಾನವಾಪಿ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 26 ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಮುಂದೂಡಿದೆ.
ಸಾಂದರ್ಭಿಕ ಚಿತ್ರ
ಆಯೋಗದ ಸಮೀಕ್ಷಾ ವರದಿಗೆ ಆಕ್ಷೇಪಣೆ ಸಲ್ಲಿಸಲು ಶೃಂಗಾರ್ ಗೌರಿ ಮತ್ತು ಜ್ಞಾನವಾಪಿ ಎರಡೂ ಕಡೆಯವರಿಗೆ ನ್ಯಾಯಾಲಯ ಅವಕಾಶ ನೀಡಿದೆ.
ಇನ್ನು ಶೃಂಗಾರ್ ಗೌರಿ-ಜ್ಞಾನವಾಪಿ ಮಸೀದಿ ಪ್ರಕರಣದ ವಾದ-ವಿವಾದಗಳ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದ್ದು, ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯ ವಾದವನ್ನು ಆಲಿಸಿದ್ದಾರೆ.