ಬಾಗಲಕೋಟೆ, ಮೇ 25 (DaijiworldNews/HR): ಸಂಪುಟಕ್ಕೆ ಸೇರಿಸಿಕೊಳ್ಳುವುದು, ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಕೇಂದ್ರದ ಬಿಜೆಪಿ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಮ್ಮ ಮನೆ ದೇವರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗಿ ಬಂದಿದ್ದೇನೆ. ನಾನೇನಾದರೂ ತಪ್ಪು ಮಾಡಿದ್ದರೆ ಚೌಡೇಶ್ವರಿ ದೇವಿ ನನಗೆ ಶಿಕ್ಷೆ ಕೊಡಲಿ. ನಾನು ಯಾವುದೇ ತಪ್ಪು ಮಾಡಿಲ್ಲ ಅಂದರೆ ಶಿಕ್ಷೆಯಿಂದ ಮುಕ್ತಿ ನೀಡಲಿ. ಇದು ದೇವರಲ್ಲಿ ನನ್ನ ಪ್ರಾರ್ಥನೆ ಎಂದರು.
ಇನ್ನು 15 ದಿನದಲ್ಲಿ ಇದಕ್ಕೊಂದು ರೂಪ ಬರುತ್ತದೆ ಎಂದುಕೊಂಡಿದ್ದೇನೆ. ಸಂಪುಟಕ್ಕೆ ಸೇರಿಸಿಕೊಳ್ಳುವುದು, ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಕೇಂದ್ರದ ಬಿಜೆಪಿ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.