ಪಂಜಾಬ್,ಮೇ 28 (DaijiworldNews/HR): ರಾಜ್ಯದಲ್ಲಿನ 424 ಮಂದಿಗೆ ಒದಗಿಸಿದ್ದ ಭದ್ರತೆಯನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ತಿಳಿದು ಬಂದಿದೆ.
ಏಪ್ರಿಲ್ನಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು ಮತ್ತು ಇತರ ನಾಯಕರು ಸೇರಿದಂತೆ 184 ಜನರ ಭದ್ರತೆಯನ್ನು ಹಿಂತೆಗೆದುಕೊಳ್ಳುವಂತೆ ಪಂಜಾಬ್ ಸರ್ಕಾರ ಆದೇಶ ನೀಡಿದ್ದು, ಇದೀಗ ಮತ್ತೆ 424 ಜನರಿಗೆ ಒದಗಿಸಿದ್ದ ಭದ್ರತೆಯನ್ನು ಹಿಂತೆಗೆದುಕೊಂಡಿದೆ.
ಪಂಜಾಬ್ನ ಮಾಜಿ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ, ಕ್ಯಾಪ್ಟನ್ ಅಮರಿಂದರ್ ಸಿಂಗ್, ಅವರ ಪುತ್ರ ರಣೀಂದರ್ ಸಿಂಗ್, ಕಾಂಗ್ರೆಸ್ ಶಾಸಕ ಪರತಾಪ್ ಸಿಂಗ್ ಬಜ್ವಾವೆರೆ, ಅವರ ಪತ್ನಿ ಹಾಗೂ ಅವರ ಕುಟುಂಬಕ್ಕೆ ಒದಗಿಸಲಾಗಿದ್ದ ಭದ್ರತೆಯನ್ನು ಕಳೆದ ತಿಂಗಳು ಹಿಂಪಡೆಯಲಾಗಿತ್ತು.
ಇನ್ನು ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಒಂದು ಪರ್ಸೆಂಟ್ ಕಮಿಷನ್ ಪಡೆದಿದ್ದ ಆರೋಗ್ಯ ಸಚಿವರನ್ನು ಇತ್ತೀಚೆಗೆ ಸಂಪುಟದಿಂದ ಕಿತ್ತು ಹಾಕಿ, ಅವರನ್ನು ಬಂಧಿಸುವಂತೆ ಆದೇಶ ಹೊರಡಿಸಲಾಗಿತ್ತು.