ಬೆಂಗಳೂರು, ಮೇ 29 (DaijiworldNews/SM): ಕರ್ನಾಟಕದಿಂದ ರಾಜ್ಯಸಭೆಗೆ ಬಿಜೆಪಿಯಿಂದ ಕನ್ನಡದ ಖ್ಯಾತ ನಟ, ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಆ ಮೂಲಕ ಕಳೆದ ಕೆಲವು ದಿನಗಲಿಂದ ಉಂಟಾಗಿದ್ದ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.
ರಾಜ್ಯ ಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇನ್ನೂ ಮೂರು ದಿನಗಳು ಬಾಕಿ ಇರುವಂತೆಯೇ ಬಿಜೆಪಿ ಹೈಕಮಾಂಡ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಕರ್ನಾಟಕ ಸೇರಿದಂತೆ 15 ರಾಜ್ಯಗಳಿಂದ ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ.
ರಾಜ್ಯಸಭೆಗೆ ಕರ್ನಾಟಕದಿಂದ ನಾಲ್ಕು ಸ್ಥಾನಗಳಿವೆ. ಅತೀ ಹೆಚ್ಚು ಸ್ಥಾನಗಳು ಉತ್ತರ ಪ್ರದೇಶ ಹೊಂದಿದ್ದು, ಹನ್ನೊಂದು ಸ್ಥಾನಗಳಿವೆ.