ಬೆಂಗಳೂರು, ಜೂ 03 (DaijiworldNews/MS): ಸಿಡಿ' ಪಕ್ಷವು 'ಇಡಿ'ಯನ್ನು ಚೂ ಬಿಟ್ಟರೆ ಹೆದರುವವರು ಯಾರೂ ಇಲ್ಲ ಎಂದು ಬಿಜೆಪಿಗೆ ಕಾಂಗ್ರೆಸ್ ಖಡಕ್ ತಿರುಗೇಟು ನೀಡಿದೆ.
ಗುರುವಾರ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೋವಿಡ್ ಸೋಂಕು ತಗುಲಿರುವುದು ಪರೀಕ್ಷೆಯಿಂದ ದೃಢಪಟ್ಟಿತ್ತು. ಆದರೆ ಈ ಬಗ್ಗೆ ಬಿಜೆಪಿ ವ್ಯಂಗ್ಯವಾಡಿ ಟ್ವಿಟರ್ ನಲ್ಲಿ ಇದು, ಇಡಿ ವಿಚಾರಣೆ ತಪ್ಪಿಸಿಕೊಳ್ಳೋ ನಾಟಕ ಎಂದು ಹೇಳಿತ್ತು. ಇದಕ್ಕೆ ತಿರುಗೇಟು ನೀಡಿರುವ ರಾಜ್ಯ ಕಾಂಗ್ರೆಸ್ ಘಟಕ , ಒಬ್ಬರ ಅನಾರೋಗ್ಯವನ್ನು ಹಿಯಾಳಿಸುವ ವಿಕೃತಿ ಇರುವುದು ಬಿಜೆಪಿ ಪಕ್ಷಕ್ಕೆ ಮಾತ್ರ ಎಂದು ಹೇಳಿದೆ.
'ಸಿಡಿ' ಪಕ್ಷವು 'ಇಡಿ'ಯನ್ನು ಚೂ ಬಿಟ್ಟರೆ ಹೆದರುವವರು ಯಾರೂ ಇಲ್ಲ. ಹಾಗೆಯೇ ಕೋವಿಡ್ ವರದಿ ನೀಡುವುದು ನಿಮ್ಮದೇ ಸರ್ಕಾರದ ವ್ಯವಸ್ಥೆ ಎಂಬುದು ನೆನಪಿರಲಿ. SIT ತನಿಖೆ ತಪ್ಪಿಸಲು ರಮೇಶ್ ಜಾರಕಿಹೊಳಿಯ ಕೋವಿಡ್ ಸೋಂಕಿನ ನಾಟಕವನ್ನು ರಾಜ್ಯ ಕಂಡಿದೆ ಎಂದು ವಾಗ್ದಾಳಿ ನಡೆಸಿದೆ.