ಶ್ರೀನಗರ, ಜೂ 04 (DaijiworldNews/MS): ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ನಡೆದ ಎನ್ಕೌಂಟರ್ನಲ್ಲಿ ಉಗ್ರ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಸ್ವಯಂ ಘೋಷಿತ ಕಮಾಂಡರ್ನನ್ನು ಹತ್ಯೆ ಮಾಡಲಾಗಿದ್ದು ಈ ಕಾರ್ಯಾಚರಣೆಯ ಸಂದರ್ಭ ಮೂವರು ಯೋಧರು ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್, ನಿಷೇಧಿತ ಉಗ್ರ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಎಚ್.ಎಂ.ನಿಸಾರ್ ಖಾಂಡೆ ಅವರನ್ನು ಹತ್ಯೆ ಮಾಡಲಾಗಿದೆ. 1 ಎಕೆ 47 ರೈಫಲ್ , ಮದ್ದು ಗುಂಡುಗಳು ಸೇರಿದಂತೆ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರಿದೆ' ಎಂದು ಎಂದಿದ್ದಾರೆ.
ಪೊಲೀಸ್ ವಕ್ತಾರರ ಪ್ರಕಾರ, ಅನಂತನಾಗ್ ಜಿಲ್ಲೆಯ ರಿಶಿಪೋರಾ ಪ್ರದೇಶದಲ್ಲಿ ಶುಕ್ರವಾರ ಸಂಜೆ ಎನ್ಕೌಂಟರ್ ಕಾರ್ಯಾಚರಣೆ ಆರಂಭಗೊಂಡಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದು ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಶ್ರೀನಗರದ 92 ಬೇಸ್ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ಅವರ ಆರೋಗ್ಯ ಸ್ಥಿರವಾಗಿದೆ' ಎಂದಿದ್ದಾರೆ.