ಬೆಂಗಳೂರು, ಜೂ 10 (DaijiworldNews/DB): ಆತ್ಮಸಾಕ್ಷಿಯ ಮತಗಳು ಖಂಡಿತಾ ಜೆಡಿಎಸ್ಗೆ ಬರಲಿದೆ. ನಾಳೆಯಿಂದ ರಾಜ್ಯದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯಸಭೆ ಚುನಾವಣೆ ಹಿನ್ನೆಲೆ ವಿಧಾನ ಸೌಧಕ್ಕೆ ಜೆಡಿಎಸ್ ಶಾಸಕರು ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ಈ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆಂಬ ವಿಶ್ವಾಸವಿದೆ. ಹೊಸ ಅಧ್ಯಾಯ ಆರಂಭಕ್ಕೆ ಕಾದು ನೋಡಿ ಎಂದರು.
ರಾಜ್ಯಸಭೆಗೆ ಬಿರುಸಿನ ಮತದಾನ ನಡೆಯುತ್ತಿದ್ದು, ಈಗಾಗಲೇ ಪ್ರಮುಖ ನಾಯಕರು ಆಗಮಿಸಿ ಮತದಾನದಲ್ಲಿ ಪಾಲ್ಗೊಂಡಿದ್ದಾರೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯೊಳಗೆ ಭದ್ರವಾಗಿದೆ.